ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ: ಹಂಚಿ ಗ್ರಾಮದಲ್ಲಿ ಮಧು ಬಂಗಾರಪ್ಪ ಮನವಿ

Update: 2023-05-06 15:32 GMT

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಬಡವರ ಪರವಾಗಿರುವ ಪಕ್ಷ. ಕಾಂಗ್ರೆಸ್ ಪಕ್ಷ  ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದ್ದಾರೆ. 

ಸೊರಬ ತಾಲೂಕಿನ ಹಂಚಿ ಗ್ರಾಮದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು,ಮೇ.10 ರಂದು ನಡೆಯುವ ಮತದಾನದಲ್ಲಿ ಎಲ್ಲರೂ ತಪ್ಪದೇ ಮತಹಾಕಬೇಕು. ಈ ಬಾರಿ ಅತ್ಯಧಿಕ ಮತಗಳ ಅಂತರದಲ್ಲಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಬಂಗಾರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಆರಾಧಾನ,ಆಶ್ರಯ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ ನೆರವಾಗಿದ್ದರು ಎಂದ ಅವರು,ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎಂದರು.

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ. ನಮ್ಮ ಸರ್ಕಾರದಲ್ಲಿ ಯಾರು ಕೂಡ ಹಸಿವಿನಿಂದ ಇರಬಾರದು ಎಂದ ಅವರು,ಗೃಹ ಲಕ್ಷ್ಮೀ ಯೋಜನೆಯಡಿ ಮಹಿಳೆಯರ ಖಾತೆಗೆ 2000 ಸಾವಿರ ರೂಪಾಯಿಯನ್ನು ನೀಡುತ್ತೇವೆ.ಬಿಜೆಪಿ ಸರ್ಕಾರ ಬಂದ ಮೇಲೆ ಬಡವರು ಸಂಕಷ್ಟದಲ್ಲಿದ್ದಾರೆ.ಬಡವರ ಪರವಾಗಿ ಕಾಂಗ್ರೆಸ್ ಪಕ್ಷ ಇರಲಿದೆ.ಹಾಗಾಗಿ ಸೊರಬದ ಜನತೆ ಅತಿ ಹೆಚ್ಚಿನ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

Similar News