ಮಂಗಳೂರು ಉತ್ತರ ಕಾಂಗ್ರೆಸ್ ಪದಾಧಿಕಾರಿಗಳ ಸಭೆ

Update: 2023-05-08 15:10 GMT

ಸುರತ್ಕಲ್, ಮೇ 8: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಸೋಮವಾರ ಹೊಸಬೆಟ್ಟು ಚುನಾವಣಾ ಕಚೇರಿಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಕ್ಷೇತ್ರದ ಅಭ್ಯರ್ಥಿ ಇನಾಯಕಲಿ ಮಾತನಾಡಿ, ಚುನಾವಣೆಯ ದಿನ ಕಾರ್ಯಕರ್ತರು ಮಾಡಬೇಕಾದ ಕೆಲಸಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಗೇರಿ, ಪುರುಷೋತ್ತಮ ಚಿತ್ರಾಪುರ, ಕವಿತಾ ಸುನಿಲ್, ಪ್ರತಿಭಾ ಕೂಳಾಯಿ, ರಾಘವೇಂದ್ರ ರಾವ್, ಗೋವರ್ಧನ್ , ಸದಾಶಿವ ಶೆಟ್ಟಿ, ನೀರಜ್ ಪಾಲ್, ಸಿಂಥ್ಯಾ, ಬ್ಲಾಕ್ ಗಳ ಅಧ್ಯಕ್ಷರು, ಬೂತ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.‌

Similar News