ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ರಾಜಸ್ಥಾನ ತಲುಪಿದ ರಾಹುಲ್ ಗಾಂಧಿ

Update: 2023-05-09 09:38 GMT

ಸಿರೋಹಿ: ಸರ್ವೋದಯ ಸಂಗಮ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ  ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೌಂಟ್ ಅಬು ತಲುಪಿದ್ದಾರೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷರು ಮೌಂಟ್ ಅಬುದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ತರಬೇತಿ ಹಾಗೂ  ಸಂವಾದವನ್ನು ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಒಂದು ದಿನ ಮುಂಚಿತವಾಗಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ದಿಲ್ಲಿಯಿಂದ ಉದಯಪುರಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಹಾಗೂ  ಇತರ ಹಿರಿಯ ಕಾಂಗ್ರೆಸ್ ನಾಯಕರು ಬರಮಾಡಿಕೊಂಡರು. ರಾಹುಲ್ ಗಾಂಧಿ ಚಾಪರ್ ನಲ್ಲಿ ಮೌಂಟ್ ಅಬುಗೆ ತೆರಳಿದ್ದರು.

Similar News