ಕುಬಟೂರಿನ‌ನಲ್ಲಿ ಮತ ಚಲಾಯಿಸಿದ ಮಧು ಬಂಗಾರಪ್ಪ

Update: 2023-05-10 06:37 GMT

ಶಿವಮೊಗ್ಗ: ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪನವರು ತಮ್ಮ‌ ಮತದಾನದ ಹಕ್ಕು ಚಲಾಯಿಸಿದರು.

ಬಂಗಾರಪ್ಪನವರ ಹುಟ್ಟೂರಾದ ಕುಬಟೂರಿನ‌ ಸರ್ಕಾರಿ ಶಾಲೆಯ ಮತ ಕೇಂದ್ರದಲ್ಲಿ ಮಧು ಬಂಗಾರಪ್ಪ ಹಾಗೂ ಅವರ  ಪತ್ನಿ ಅನಿತಾ ಮಧುಬಂಗಾರಪ್ಪ ಅವರು ಮತದಾನ ಮಾಡಿದರು.

ಮತದಾನಕ್ಕೂ ಮೊದಲು ಬಂಗಾರಪ್ಪ ಹಾಗೂ ಶಂಕುತಲ ಬಂಗಾರಪ್ಪ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ  ಕುಬಟೂರಿನಲ್ಲಿರುವ ದ್ಯಾವಮ್ಮ  ದೇವಿಗೆ ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ.ಈ ಬಾರಿ ಅತ್ಯಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿಸುತ್ತೇನೆ ಎಂದರು.

ನಾನು ರಾಜ್ಯಾದ್ಯಂತ ಪ್ರವಾಸ‌ ಮಾಡಿದ್ದೇನೆ.ರಾಜ್ಯದ ಜನರು ಬಿಜೆಪಿ ದುರಾಡಳಿತಕ್ಕೆ ಬೇಸರ ವ್ಯಕ್ತಪಡಿಸಿ,ಬದಲಾವಣೆ ಬಯಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

Similar News