×
Ad

ಈಗ ಸ್ವಲ್ಪ ಬಿಡುವು ಮಾಡಿಕೊಂಡು ಕುಟುಂಬ ಸದಸ್ಯರ ಜೊತೆ ಕಾಲ ಕಳೆಯಿರಿ...: ಅಭಿಮಾನಿಗಳಿಗೆ ಮನವಿ ಮಾಡಿದ ಸಿದ್ದರಾಮಯ್ಯ

Update: 2023-05-11 11:51 IST

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿದ ಮಾಡಿದ ಅಭಿಮಾನಿಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು. 

ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ಪ್ರಚಾರ ಮಾಡಿದ್ದಾರೆ. ಅವರಲ್ಲರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದು ಹಾರೈಸಿದ್ದಾರೆ.

Similar News