ಖಾತೆ ತೆರೆದ KRPP: ಗಂಗಾವತಿಯಲ್ಲಿ ಸಂಸ್ಥಾಪಕ ಅಧ್ಯಕ್ಷ ಜನಾರ್ದನ ರೆಡ್ಡಿಗೆ ಗೆಲುವು
Update: 2023-05-13 13:25 GMT
ಬೆಂಗಳೂರು, ಮೇ 13: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ(KRPP)ದ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿಗೆ ಗೆಲುವು ಸಾಧಿಸುವ ಮೂಲಕ ತನ್ನ ಪಕ್ಷದ ಖಾತೆ ತೆರೆದಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಗಾಲಿ ಜನಾರ್ದನ ರೆಡ್ಡಿ, ಒಟ್ಟು 66,213 ಮತಗಳನ್ನು ಗಳಿಸಿದ್ದರೆ, ಅವರ ಪ್ರತಿಸ್ಪರ್ಧಿ ಇಕ್ಬಾಲ್ ಅನ್ಸಾರಿ 57,947 ಮತಗಳನ್ನು ಗಳಿಸುವ ಮೂಲಕ ಪರಾಭವಗೊಂಡಿದ್ದಾರೆ. ಜನಾರ್ದನ ರೆಡ್ಡಿ 8,266 ಮತಗಳ ಅಂತರದಿಂದ ಜಯಗಳಿಸಿದ್ದಾರೆ.