ಉಡುಪಿ: ಅಧಿಕಾರಿಗಳು - ಮಾಧ್ಯಮದವರ ಮಧ್ಯೆ ವಾಗ್ವಾದ
Update: 2023-05-13 21:30 IST
ಉಡುಪಿ, ಮೇ 13: ಮತ ಎಣಿಕೆ ಕೇಂದ್ರದಲ್ಲಿ ವಿಳಂಬ ಮಾಹಿತಿ ನೀಡುವ ಬಗ್ಗೆ ಅಧಿಕಾರಿಗಳು ಹಾಗೂ ಮಾಧ್ಯಮದ ಮಧ್ಯೆ ವಾಗ್ವಾದ ನಡೆಯಿತು. ಇದರಿಂದ ಕೇಂದ್ರದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಯಿತು.
ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಾಧ್ಯಮದವರನ್ನು ಸಮಾಧಾನ ಪಡಿಸಿ ತಕ್ಷಣದಲ್ಲೇ ಮಾಹಿತಿ ನೀಡುವ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.