ನನ್ನ ಸೋಲಿನಲ್ಲಿ 'ಗ್ಯಾರಂಟಿ ಕಾರ್ಡ್' ಪರಿಣಾಮ ಬೀರಿದೆ: ಎಂ.ಪಿ.ಅಪ್ಪಚ್ಚುರಂಜನ್
Update: 2023-05-13 23:41 IST
ಮಡಿಕೇರಿ ಮೇ 13 : ಜನರ ತೀರ್ಪಿಗೆ ತಲೆಬಾಗುವುದಾಗಿ ಮಡಿಕೇರಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ಮತ ಎಣಿಕೆ ಕೇಂದ್ರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 25ವರ್ಷಗಳಿಂದ ಕ್ಷೇತ್ರದ ಮತದಾರರು ನನಗೆ ಆಶೀರ್ವಾದ ಮಾಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಅಧಿಕಾರದ ಅವಧಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯ ನಿರ್ವಹಿಸಿದ ತೃಪ್ತಿ ಇದೆ. ಇದೀಗ ಕಾಂಗ್ರೆಸ್'ನ ಗ್ಯಾರಂಟಿ ಕಾರ್ಡ್ ಹಾಗೂ ಉಚಿತ ಅಕ್ಕಿ ನೀಡುವ ಘೋಷಣೆಯ ಪರಿಣಾಮದಿಂದಾಗಿ ಮತಗಳು ಕಾಂಗ್ರೆಸ್'ಗೆ ಹೋಗಿದೆ. ಇದರಿಂದಾಗಿ ಈ ಬಾರಿ ಸೋಲು ಉಂಟಾಗಿದೆ ಎಂದು ಹೇಳಿದರು.
ಚುನಾವಣೆ ಸಂದರ್ಭ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಎಲ್ಲರಿಗೂ ತಾನು ಆಭಾರಿಯಾಗಿರುವುದಾಗಿ ಅಪ್ಪಚ್ಚು ರಂಜನ್ ಹೇಳಿದರು.