×
Ad

ದ್ವೇಷ, ಬೂಟಾಟಿಕೆಯನ್ನು ಒದ್ದೋಡಿಸಿದ ಕನ್ನಡಿಗರಿಗೆ ಧನ್ಯವಾದ: ನಟ ಪ್ರಕಾಶ್ ರಾಜ್

Update: 2023-05-14 10:25 IST

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಆದಿತ್ಯನಾಥ್ ಮೊದಲಾದವರ ಸರಣಿ ಪ್ರಚಾರ ಸಭೆಗಳು ಯಾವುದೇ ಪ್ರಯೋಜನ ನೀಡಿಲ್ಲ. ಈ ಬಗ್ಗೆ ಬಹುಭಾಷಾ ನಟ  ಪ್ರಕಾಶ್ ರಾಜ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ದ್ವೇಷ ಮತ್ತು ಬೂಟಾಟಿಕೆಯನ್ನು ಒದ್ದೋಡಿಸಿದ್ದಕ್ಕಾಗಿ ಕರ್ನಾಟಕಕ್ಕೆ ಧನ್ಯವಾದಗಳು. ಬೆತ್ತಲೆಯಾದ ಚಕ್ರವರ್ತಿ' ಎಂದು ಪ್ರಕಾಶ್​ ರಾಜ್​ ಅವರು ಟ್ವೀಟ್​ ಮಾಡಿದ್ದಾರೆ.

ಈ ಬರಹದೊಂದಿಗೆ ಅವರು ಎಂದಿನಂತೆ ಜಸ್ಟ್​ ಆಸ್ಕಿಂಗ್​ ಎಂಬ ಹ್ಯಾಷ್​ಟ್ಯಾಗ್​ ಬಳಸಿದ್ದಾರೆ.​

Similar News