×
Ad

ಶಾಸಕಾಂಗ ಪಕ್ಷದ ಸಭೆ ನಿಗದಿ ಬೆನ್ನಲ್ಲೇ ದೆಹಲಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ

Update: 2023-05-14 14:06 IST

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದು, ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿರುವ ಬೆನ್ನಲ್ಲೇ ಖರ್ಗೆ ಅವರು  ದೆಹಲಿಗೆ ತೆರಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ಮಧ್ಯಾಹ್ನ 1.30ರ ವಿಮಾನದಲ್ಲಿ ಖರ್ಗೆ ಅವರು ಹೊರಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ (ಸಿಎಲ್ ಪಿ) ಸಭೆ ಇಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಿಎಲ್ಪಿ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ಭಾಗವಹಿಸಬೇಕು ಎಂದು ಕೆಪಿಸಿಸಿಯಿಂದ ಸಂದೇಶ ಕಳುಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Similar News