ಮಲಗಿದ್ದಲ್ಲೇ ಮೃತಪಟ್ಟ ಹಲಸೂರು ಗೇಟ್​ ಸಂಚಾರ ಪೊಲೀಸ್ ಎಎಸ್‌ಐ

Update: 2023-05-16 06:01 GMT

ಬೆಂಗಳೂರು, ಮೇ.16: ಹಲಸೂರು ಗೇಟ್​ ಸಂಚಾರ ಪೊಲೀಸ್ ಠಾಣೆಯ ಎಎಸ್​ಐ ಮಲಗಿದ್ದ ರೀತಿಯಲ್ಲೇ ಮೃತಪಟ್ಟರುವ ಘಟನೆ ಮಂಗಳವಾರ ಮುಂಜಾನೆ ವರದಿಯಾಗಿದೆ.

ಮೃತರನ್ನು ಬೆಂಗಳೂರಿನ ಹಲಸೂರು ಗೇಟ್​ ಸಂಚಾರ ಪೊಲೀಸ್ ಠಾಣೆಯ ಎಎಸ್​ಐ ಆನಂದ್ ಕುಮಾರ್ ನಿನ್ನೆ ರಾತ್ರಿ ಪಾಳಿ ಕೆಲಸ ಮಾಡಿ ನಾಗರಭಾವಿ ಬಳಿಯ ಮನೆಯಲ್ಲಿ ಮಲಗಿದ್ದರು. ಆದರೆ, ಇಂದು ಮುಂಜಾನೆ ಎಂದಿನಂತೆ ಅವರನ್ನು ಮನೆಯವರು ಏಳಿಸಲು ಮನೆಯವರು ಪ್ರಯತ್ನ ಮಾಡಿದ್ದಾರೆ. ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗದಿದ್ದಾಗ ಆತಂಕದಲ್ಲೇ ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದೆ.

ಈ ವೇಳೆ ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮಲಗಿದ್ದಾಗಲೇ ಆನಂದ್​ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ.  ಆನಂದ್ ಕುಮಾರ್ ಸಾವಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Similar News