ಮುಖ್ಯಮಂತ್ರಿ ಆಯ್ಕೆ ಮಧ್ಯೆ ನೂತನ ಸಚಿವರ ಪಟ್ಟಿ ಸಿದ್ಧಪಡಿಸುತ್ತಿದೆ ಕಾಂಗ್ರೆಸ್; ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ...
ಬೆಂಗಳೂರು: ಕಾಂಗ್ರೆಸ್ ನಲ್ಲಿ ಕಗ್ಗಂಟಾಗಿರುವ ಮುಖ್ಯಮಂತ್ರಿ ಆಯ್ಕೆ ಮಧ್ಯೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್ ಕನುಗೋಲು ಸೇರಿ ಕಾಂಗ್ರೆಸ್'ನ ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಯುವ ಶಾಸಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದ್ದು, ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ರಚನೆ, ಪ್ರಣಾಳಿಕೆ ಸಮರ್ಥವಾಗಿ ಜಾರಿ ಮಾಡುವವರಿಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸೇರಿ 5 ಮಂದಿ ಪರಿಷತ್ ಸದಸ್ಯರ ಹೆಸರು ಶಾರ್ಟ್ ಲಿಸ್ಟ್'ನಲ್ಲಿದೆ.
ಇದನ್ನೂ ಓದಿ: ಬಿಜೆಪಿ ಮುಖಂಡರ ಸಭೆ: ವಿಪಕ್ಷ ನಾಯಕ ಸ್ಥಾನದ ರೇಸ್ನಲ್ಲಿ ಯಾರಿದ್ದಾರೆ?
ಸಂಭಾವ್ಯ ಸಚಿವರ ಪಟ್ಟಿ ಇಂತಿದೆ...
ಬೆಳಗಾವಿ – ಲಕ್ಷ್ಮಣ್ ಸವದಿ, ಲಕ್ಷ್ಮೀ ಹೇಬ್ಬಾಳ್ಕರ್, ಸತೀಶ್ ಜಾರಕಿಹೊಳಿ
ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
ಕಲಬುರಗಿ – ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್, ಶರಣ ಪ್ರಕಾಶ್ ಪಾಟೀಲ್
ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ
ಯಾದಗಿರಿ – ಶರಣಪ್ಪ ದರ್ಶನಾಪುರ್
ಬೀದರ್ – ರಹೀಮ್ ಖಾನ್, ಈಶ್ವರ್ ಖಂಡ್ರೆ
ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ
ಗದಗ – ಹೆಚ್.ಕೆ. ಪಾಟೀಲ್
ಧಾರವಾಡ – ವಿನಯ್ ಕುಲಕರ್ಣಿ, ಪ್ರಸಾದ್ ಅಬ್ಬಯ್ಯ/ಸಂತೋಷ್ ಲಾಡ್
ಉತ್ತರ ಕನ್ನಡ – ಭೀಮಣ್ಣ ನಾಯಕ್
ಹಾವೇರಿ – ರುದ್ರಪ್ಪ ಲಮಾಣಿ
ಬಳ್ಳಾರಿ – ತುಕಾರಾಮ್, ನಾಗೇಂದ್ರ
ಚಿತ್ರದುರ್ಗ – ರಘುಮೂರ್ತಿ
ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್ಎಸ್ ಮಲ್ಲಿಕಾರ್ಜುನ
ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್
ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ
ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ
ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ
ಕೋಲಾರ- ರೂಪ ಶಶೀಧರ್/ ನಾರಾಯಣ ಸ್ವಾಮಿ
ಬೆಂಗಳೂರು- ಕೆಜೆ ಜಾರ್ಜ್/ ರಾಮಲಿಂಗಾ ರೆಡ್ಡಿ, ಎನ್.ಎ ಹ್ಯಾರಿಸ್, ಎಂ. ಕೃಷ್ಣಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
ಮಂಡ್ಯ- ಎನ್ ಚೆಲುವರಾಯ ಸ್ವಾಮಿ
ಮಂಗಳೂರು- ಯುಟಿ ಖಾದರ್
ಮೈಸೂರು- ಎಚ್ ಸಿ. ಮಹದೇವಪ್ಪ/ ತನ್ವೀರ್ ಸೇಠ್
ಚಾಮರಾಜನಗರ- ಪುಟ್ಟರಂಗ ಶೆಟ್ಟಿ
ಕೊಡಗು- ಎ ಎಸ್ ಪೊನ್ನಣ್ಣ (ವಿರಾಜಪೇಟೆ ಕ್ಷೇತ್ರದ ನೂತನ ಶಾಸಕ)
ಬೆಂಗಳೂರು ಗ್ರಾಮಾಂತರ- ಕೆ ಎಚ್ ಮುನಿಯಪ್ಪ
ವಿಧಾನ ಪರಿಷತ್ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು:
ಬಿ.ಕೆ. ಹರಿಪ್ರಸಾದ್
ಸಲೀಂ ಅಹಮದ್
ನಝೀರ್ ಅಹಮದ್
ಮಂಜುನಾಥ್ ಭಂಡಾರಿ
ಎಸ್. ರವಿ