ಜಗದೀಶ್ ಶೆಟ್ಟರ್ ರನ್ನು ಭೇಟಿಯಾದ ಪರಮೇಶ್ವರ್, ದಿನೇಶ್ ಗುಂಡೂರಾವ್

Update: 2023-05-16 07:27 GMT

ಹುಬ್ಬಳ್ಳಿ: ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಶಾಸಕರಾದ ಡಾ. ಜಿ. ಪರಮೇಶ್ವರ್ ರವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ರವರ ನಿವಾಸಕ್ಕೆ ತೆರಳಿ ಕೆಲ ಕಾಲ ಚರ್ಚೆ ನಡೆಸಿದರು.

ಈ ವೇಳೆ  ಜಗದೀಶ್ ಶೆಟ್ಟರ್ ರವರ ಅನಿರೀಕ್ಷಿತ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿ ''ಯಾವುದೇ ಸಂದರ್ಭದಲ್ಲಿ ಪಕ್ಷ ನಿಮ್ಮೊಂದಿಗಿದೆ ಎದೆಗುಂದುವುದು ಬೇಡ'' ಎಂದು ಆತ್ಮಸ್ಥೈರ್ಯ ತುಂಬಿದರು ಎನ್ನಲಾಗಿದೆ.

ಶಾಸಕರಾದ ದಿನೇಶ್ ಗುಂಡೂರಾವ್, ಮಾಜಿ ಪರಿಷತ್ ಸದಸ್ಯರಾದ ಎಂ.ಸಿ.ವೇಣುಗೋಪಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Similar News