×
Ad

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ಪ್ರಶಾಂತ್ ಮಿಶ್ರಾ, ಹಿರಿಯ ವಕೀಲ ಕೆ.ವಿ. ವಿಶ್ವನಾಥನ್ ಪ್ರಮಾಣ ವಚನ

Update: 2023-05-19 10:45 IST

 ಹೊಸದಿಲ್ಲಿ: ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಹಿರಿಯ ವಕೀಲ ಕೆ.ವಿ. ವಿಶ್ವನಾಥನ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದರು.

ಇಬ್ಬರು ಹೊಸ ನ್ಯಾಯಾಧೀಶರ ನೇಮಕದೊಂದಿಗೆ ಸುಪ್ರೀಂ ಕೋರ್ಟ್‌ನ ಬಲವು 34 ಕ್ಕೆ ಏರಿತು. 

ಮೇ 16 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ  ಈ ಇಬ್ಬರ ಪದೋನ್ನತಿಗೆ   ಶಿಫಾರಸು ಮಾಡಿತ್ತು ಹಾಗೂ  ಕೇಂದ್ರ ಸರಕಾರವು ಈ ಇಬ್ಬರ ನೇಮಕಾತಿಯ ಕುರಿತು  ಮೇ 18ರಂದು ಅಧಿಸೂಚನೆ ಹೊರಡಿಸಿತು. 

Similar News