ನಾಳೆ (ಮೇ 20) ಸಿಎಂ, ಡಿಸಿಎಂ ಪ್ರಮಾಣವಚನ; ರಸ್ತೆ ಸಂಚಾರ ಬದಲಾವಣೆಯ ವಿವರ ಇಲ್ಲಿದೆ
ಬೆಂಗಳೂರು: ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ (ಶನಿವಾರ) ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಅವುಗಳ ಹಾಗೂ ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.
1 ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಭಂದಿಸಿದ್ದು, ರಸ್ತೆ ಬಳಕೆದಾರರು ಕ್ವೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲೆ ರಸ್ತೆ ಅಥವಾ ಕ್ವೀನ್ಸ್ ರಸ್ತೆಯ ಮೂಲಕ ಸಂಚರಿಸಬಹುದಾಗಿರುತ್ತೆ.
2. ಬಾಳೆಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳನ್ನು ಪಟ್ಟಾ ಜಂಕ್ಷನ್ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗು ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ ತಿರುವು ಪಡೆದು ಕೆ.ಆರ್.ಸರ್ಕಲ್ ಮುಖೇನ ಸಂಚರಿಸಬಹುದಾಗಿರುತ್ತೆ.
3. ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರವನ್ನು ನಿರ್ಭಂದಿಸಿದ್ದು, ರಸ್ತೆ ಬಳಕೆದಾರರು ಕಬ್ಬನ್ ರಸ್ತೆಯ ಮುಖೇನ-ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸಬಹುದಾಗಿರುತ್ತೆ.
4. ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
5. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸೆಂಟ್ ಜೋಸೆಫ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
6. ಇತರ ವಾಹನಗಳನ್ನು ಬಿಬಿಎಂಪಿ ಮುಖ್ಯ ಕಛೇರಿ ಆವರಣ, ಬದಾಮಿ ಹೌಸ್, ಕೆ.ಜಿ. ರಸ್ತೆಯ ಎಡ ಬದಿಯಲ್ಲಿ ಹಾಗು ಯುನೈಟೆಡ್ ಮಿಷನ್ ಕಾಲೇಜ್ ಮೈದಾನದಲ್ಲಿ ನಿಲ್ಲಿಸಬಹುದಾಗಿರುತ್ತೆ.
7. ಆರ್.ಆರ್.ಎಂ.ಆರ್ ರಸ್ತೆ ಹಾಗು ಕಸ್ತೂರ್ಬಾ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿರುತ್ತೆ.
8. ಕಾರ್ಯಕ್ರಮಕ್ಕೆ ಆಗಮಿಸುವ ಆಹ್ವಾನಿತರು ತಮ್ಮ ತಮ್ಮ ವಾಹನಗಳಿಂದ ಇಳಿದು ಕೆ.ಬಿ, ರಸ್ತೆ, ಆರ್.ಆರ್.ಎಂ.ಆರ್ ಮಲ್ಯಆಸ್ಪತ್ರೆ ರಸ್ತೆ, ಮಲ್ಯ ಆಸ್ಪತ್ರೆ ರಸ್ತೆಯ ಗೇಟ್ಗಳ ಮೂಲಕ ನಡೆದು ಪ್ರವೇಶಿಸಬೇಕಾಗಿರುತ್ತೆ. ಹಾಗು ತಮ್ಮ ವಾಹನಗಳನ್ನು ಮೇಲ್ಕಂಡ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಲು ಕೋರಿದೆ.
9. ಸಾರ್ವಜನಿಕರು ಕಜಿ ರಸ್ತೆಯ ಎಸ್.ಬಿ.ಎಂ ಜಂಕ್ಷನ್ ಬಳಿ ರಿಚ್ ಮಂಡ್ ಸರ್ಕಲ್ ಬಳಿ/ಕ್ವಿನ್ಸ್ ಸರ್ಕಲ್ ಬಳಿ ವಾಹನದಿಂದ ಇಳಿದು ತಮ್ಮ ವಾಹನಗಳನ್ನು ಅರಮನೆ ಮೈದಾನದಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ.
10. ಸಮಾರಂಭ ಸ್ಥಳದಲ್ಲಿ ಯಾವುದೇ ರೀತಿಯ ಸ್ಫೋಟಕ, ಚೂಪಾದ ವಸ್ತುಗಳನ್ನು ಬೆಂಕಿಪಟ್ಟಣ, ಲೈಟರ್, ಇತ್ಯಾದಿಗಳನ್ನು ಕೊಂಡೊಯ್ಯಬಾರದು.
11. ರಸ್ತೆ ಬಳಕದಾರರು ಸಂಚಾರ ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ.
12. ನಗರದ ಯಾವುದಾದರೂ ರಸ್ತೆಯಲ್ಲಿ ವಾಹನ ಕಟ್ಟು ನಿಂತಲ್ಲಿ / ಅಪಘಾತ ಸಂಭವಿಸಿದಲ್ಲಿ ಗಮನಿಸಿದ ಕೂಡಲೇ ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080- 22943030 ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ.
13. ಮುಖ್ಯ ಕೆಲಸಗಳಿಗೆ ಹಾಗು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಇಚ್ಛಿಸುವವರು ಸಾಕಷ್ಟು ಮುಂಚೆಯೇ ಪ್ರಯಾಣವನ್ನು ಪ್ರಾರಂಭಿಸಲು ಕೋರಿದೆ.