ಚಾಮರಾಜನಗರ| ಕಾರು ಢಿಕ್ಕಿ; ಬೈಕ್ ಸವಾರನಿಗೆ ಗಾಯ

Update: 2023-05-21 08:46 GMT

ಚಾಮರಾಜನಗರ: ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಕುಂದಕೆರೆ ಗ್ರಾಮದ ಮಲ್ಲಪ್ಪ ಅಪಘಾತಕ್ಕೊಳಗಾದ ವ್ಯಕ್ತಿ. ಗುಂಡ್ಲುಪೇಟೆಯಿಂದ ಮದುವೆ ಮುಗಿಸಿ ಬೈಕ್ ಮೂಲಕ  ಕೊಡಸೋಗೆ ಕಡೆಗೆ ತೆರಳುತ್ತಿದ್ದ  ವೇಳೆ ತೆರಕಣಾಂಬಿ ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಕಾರೊಂದು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಘಟನಾ ಸ್ಥಳದಲ್ಲೆ ಮಲ್ಲಪ್ಪ ಎಂಬವರ ಕಾಲಿಗೆ ಗಾಯವಾಗಿದೆ.

ಸ್ಥಳಕ್ಕೆ ಗುಂಡ್ಲುಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಗುಂಡ್ಲುಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News