ಸುಳ್ಯ : ಕಾಂಗ್ರೆಸ್ ಬ್ಯಾನರ್‌ಗೆ ಕಿಡಿಗೇಡಿಗಳಿಂದ ಬೆಂಕಿ

Update: 2023-05-21 15:54 GMT

ಸುಳ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಸಿ.ಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದಿಸಿ ಹಾಕಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಘಟನೆ ಗುತ್ತಿಗಾರಿನ ವಳಲಂಬೆಯಲ್ಲಿ ನಡೆದಿದೆ.

ಶನಿವಾರ ಸಂಜೆ ವಳಲಂಬೆಯ ಬಸ್ ನಿಲ್ದಾಣದ ಸಮೀಪ ಪೈಕ್ ಕ್ರಾಸ್ ಬಳಿ ಬ್ಯಾನರ್ ಅಳವಡಿಸಲಾಗಿತ್ತು. ರಾತ್ರಿ ಅದಕ್ಕೆ ಬೆಂಕಿ ಹಚ್ಚಲಾಗಿದ್ದು, ಬ್ಯಾನರ್ ಬಹುತೇಕ ಸುಟ್ಟು ಹೋಗಿದೆ.

ಈ ಬಗ್ಗೆ ಇಲ್ಲಿನ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Similar News