×
Ad

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ

Update: 2023-05-22 13:52 IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು‌ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. 

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕೆ.ವಿ.ಪ್ರಭಾಕರ್ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. 

Similar News