ಗುರ್ಮೆ ಸುರೇಶ್ ಶೆಟ್ಟಿ ವಿಜಯ ಯಾತ್ರೆ ಸಮಾರೋಪ

Update: 2023-05-22 12:59 GMT

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ವಿಜಯ ಯಾತ್ರೆಯ ಸಮಾರೋಪ ಸಮಾರಂಭ ರವಿವಾರ ಬಡಗುಬೆಟ್ಟಿನಲ್ಲಿ ನಡೆಯಿತು.

ಎರಡು ದಿನಗಳ ಕಾಲ ಕಾಪು ಕ್ಷೇತ್ರದ ಜನತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು. ತಮ್ಮನ್ನು ಆಯ್ಕೆ ಮಾಡಿದು ದಕ್ಕಾಗಿ ಗುರ್ಮೆ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಲಾಲಾಜಿ ಆರ್.ಮೆಂಡನ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಕ್ಷೇತ್ರ ಚುನಾವಣಾ ಪ್ರಭಾರಿ ಸುಲೋಚನಾ ಭಟ್, ವೀಣಾ ಶೆಟ್ಟಿ, ಉಪೇಂದ್ರ ನಾಯಕ್, ಪ್ರಕಾಶ್ ಶೆಟ್ಟಿ ಪಾದೇಬೆಟ್ಟು, ವೀಣಾ ಶೆಟ್ಟಿ, ಅನಿಲ್ ಕುಮಾರ್, ಶಿಲ್ಪಾಜಿ.ಸುವರ್ಣ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Similar News