​ಪುತ್ತೂರು: ಯುವಕ ಆತ್ಮಹತ್ಯೆ

Update: 2023-05-22 14:06 GMT

ಪುತ್ತೂರು: ಯುವಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಜಾರತ್ತಾರು ಎಂಬಲ್ಲಿ ಸೋಮವಾರ ನಡೆದಿದೆ.

ಜಾರತ್ತಾರು ನಿವಾಸಿ ಕುಂಜಿರ ಎಂಬವರ ಪುತ್ರ ರಿತೇಶ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ.

ಜೀವನದಲ್ಲಿ ಜಿಗುಪ್ಸೆಗೊಂಡು ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಬಿಟ್ಟು ಕೊಡಲಾಯಿತು.

ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ

Similar News