ಉಪ್ಪಿನಂಗಡಿ: ವಿದ್ಯುತ್ ಆಘಾತಕ್ಕೆ ಯುವಕ ಬಲಿ

Update: 2023-05-22 14:55 GMT

ಉಪ್ಪಿನಂಗಡಿ: ವಿದ್ಯುತ್ ಆಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್‍ನ ಕುಮಾರಧಾರ ನದಿ ತೀರದಲ್ಲಿ ನಡೆದಿದೆ.

ಶರೀಫುದ್ದೀನ್ (19) ಮೃತ ಯುವಕ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮೃತರ ಮಾವ ಹಿರೇಬಂಡಾಡಿ ಗ್ರಾಮದ ಪೆರಾಬೆ ನಿವಾಸಿ ಬಿ. ಹಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ನನ್ನ ತಂಗಿ ಹಾಗೂ ಆಕೆಯ ಮಗ ಶರೀಫುದ್ದೀನ್ ನನ್ನ ಮನೆಯಲ್ಲಿದ್ದು, ಮೇ 21ರಂದು ಸಂಜೆ 7:30ಕ್ಕೆ ನನಗೆ ಸಾರ್ವಜನಿಕರು ಫೋನಾಯಿಸಿದ್ದು, ನಿಮ್ಮ ಅಳಿಯ ಶರೀಫುದ್ದೀನ್ ಗೆ ಸಂಜೆ 6ರಿಂದ 6:30ರ ಮಧ್ಯೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್‍ನ ಕುಮಾರಧಾರ ನದಿ ಕಿನಾರೆಯ ಬಳಿ ವಿದ್ಯುತ್ ಸ್ಪರ್ಶವಾಗಿದ್ದು, ಅಸ್ವಸ್ಥಗೊಂಡ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದರು. ಅಲ್ಲಿಗೆ ಹೋಗಿ ನೋಡಿದಾಗ ಶರೀಫುದ್ದೀನ್ ಮೃತಪಟ್ಟಿದ್ದ. ಆತನ ಎದೆ ಭಾಗದಲ್ಲಿ ವಿದ್ಯುತ್ ಸ್ಪರ್ಶ ಆಗಿರುವುದು ಕಂಡು ಬಂದಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Similar News