​ಬೆಳ್ತಂಗಡಿ: ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ

Update: 2023-05-23 13:11 GMT

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ಗಡಾಯಿಕಲ್ಲಿಗೆ (ಜಮಲಾಬಾದ್) ಇಂದು  ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ.

ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ಮಳೆ ಬಂದಿದ್ದು, ಗಡಾಯಿಕಲ್ಲಿನ ಒಂದು ಭಾಗಕ್ಕೆ ಸಿಡಿಲು ಬಡಿದಿದೆ. ಇದರಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಮಳೆ ಆರಂಭಗೊಂಡಿದ್ದರಿಂದ ಬೆಂಕಿ ನಂದಿ ಹೋಗಿದೆ ಎಂದು ನಡ ಗ್ರಾಮದ  ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ವರ್ಷವೂ ಇದೇ ಭಾಗಕ್ಕೆ ಸಿಡಿಲು ಬಡಿದು, ಕಲ್ಲಿನ ಸ್ವಲ್ಪ ಭಾಗ ಸಿಡಿದು ಹೋಗಿತ್ತು. ಆಗ ದೊಡ್ಡ ಶಬ್ದವಾಗಿ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ಈ ಭಾರಿ ಅಂತಹ ಶಬ್ದ ಕೇಳಿ ಬಂದಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಿಡಿಲು ಬಡಿದು ಬೆಂಕಿ ಕಂಡು ಬಂದಾಗ ಸ್ಥಳೀಯರು ಇದನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Similar News