ಹೊನ್ನಾವರ: ಗ್ಯಾಸ್ ಟ್ಯಾಂಕರ್ ಪಲ್ಟಿ; ತಪ್ಪಿದ ದುರಂತ

Update: 2023-05-23 13:17 GMT

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ವೃತ್ತದ ಬಳಿ ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದಿದೆ.

ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದ ಅನಿಲ ಸೋರಿಕೆಯಾಗುತ್ತಿದೆ ಎಂದು ವರದಿಯಾಗಿದೆ.

ಮಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಅನಿಲ ಸಾಗಾಟ ಮಾಡುತ್ತಿದ್ದ ಗ್ಯಾಸ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಇದರಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.

ಗ್ಯಾಸ್ ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂದು ಹೇಳಲಾಗುತ್ತಿದ್ದು ಅಗ್ನಿಶಾಮಕ ದಳದವರು, ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

Similar News