ಸ್ಕಿಜೋಪ್ರೇನಿಯ ಕುರಿತು ಮಾಹಿತಿ ಕಾರ್ಯಗಾರ
ಉಡುಪಿ, ಮೇ 24: ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಮುಂಬೈ ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ಕಿಜೋಪ್ರೇನಿಯ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಗಾರವನ್ನು ಬುಧವಾರ ಆಸ್ಪತ್ರೆಯ ಕಮಲ್ ಎ.ಬಾಳಿಗ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ರೀ ಬಿಲ್ಡಿಂಗ್ ಎ ಬೆಟರ್ ಮೆಂಟಲ್ ಹೆಲ್ತ್ ಸಿಸ್ಟಮ್ ಎಂಬ ಧ್ಯೇಯ ವಾಕ್ಯದ ಈ ಕಾರ್ಯಕ್ರಮವನ್ನು ಒನ್ ಗುಡ್ ಸ್ಟೆಪ್ ಇದರ ಸಂಸ್ಥಾಪಕಿ ಅಮಿತಾ ಪೈ ಉದ್ಘಾಟಿಸಿ ಶುಭಹಾರೈಸಿದರು.
ಅಧ್ಯಕ್ಷತೆಯನ್ನು ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿ ದ್ದರು. ವೇದಿಕೆಯಲ್ಲಿ ಆಸ್ಪತ್ರೆಯ ಮನೋವೈದ್ಯರಾದ ಡಾ.ದೀಪಕ್ ಮಲ್ಯ, ಡಾ.ಮಾನಸ್ ಈ.ಆರ್., ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಉಪಸ್ಥಿತರಿದ್ದರು.
ಆಸ್ಪತ್ರೆಯ ಆಪ್ತಸಮಲೋಚಕಿ ಭಾಗ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಡಿವೈನ್ ಇನ್ಸ್ಟಿಟ್ಯೂಷನ್ನ ನರ್ಸಿಂಗ್ ವಿದ್ಯಾರ್ಥಿಗಳು ಮಾಹಿತಿ ಕಾರ್ಯಾ ಗಾರದ ಪ್ರಯೋಜನವನ್ನು ಪಡೆದರು.