ಭಟ್ಕಳ: ಕಾರು ಢಿಕ್ಕಿ; ಪಾದಚಾರಿ ಮೃತ್ಯು

Update: 2023-05-24 12:47 GMT

ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಸಾವನಪ್ಪಿರುವ ಘಟನೆ ಮಂಗಳವಾರ ವರದಿಯಾಗಿದೆ. 

ತೆರ್ನಮಕ್ಕಿ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು  ಹೆದ್ದಾರಿ ಬದಿಯಿಂದ ಸಭಾತಿ ಕಡೆಗೆ ನಡೆದು ಕೊಂಡು ಹೋಗುತ್ತಿದ್ದ  ಶಿಕ್ಷಕ ಪ್ರಾನ್ಸಿಸ್ ಅಂತೋನಿ ಗೋಮ್ಸ್ (55) ಅವರಿಗೆ ಭಟ್ಕಳ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತಕ್ಕೆ ಕಾರಣನಾದ ಕಾರು ಚಾಲಕನನ್ನು ಬೈಂದೂರು, ಗಂಗನಾಡಿ ನಿವಾಸಿ ಸತೀಶ್ ಆಚಾರಿ ಎಂದು ಗುರುತಿಸಲಾಗಿದ್ದು ಕಾರು ಚಾಲಕ ಸೇರಿದಂತೆ ಓರ್ವ ಪ್ರಯಾಣಿಕ ಕೂಡ ಗಾಯಗೊಂಡಿದ್ದಾರೆ. 
ಈ ಕುರಿತಂತೆ ಮುರುಢೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News