ರಾಜ್ಯದಲ್ಲಿರುವುದು ಸಿದ್ದರಾಮಯ್ಯ-ಡಿಕೆಶಿ ಸಮ್ಮಿಶ್ರ ಸರಕಾರ: ಮಾಜಿ ಸಚಿವ ಆರ್. ಅಶೋಕ್

Update: 2023-05-24 16:08 GMT

ಬೆಂಗಳೂರು, ಮೇ 24: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇಲ್ಲ. ಇದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಇರಲ್ಲ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಂದರೆ ಗೂಂಡಾಗಿರಿ, ಗೂಂಡಾಗಿರಿ ಅಂದರೆ ಕಾಂಗ್ರೆಸ್ ಎನ್ನುವುದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರಿಗೆ ಬೆದರಿಕೆ ಹಾಕುವ ಮೂಲಕ ಸಾಬೀತುಪಡಿಸಿದ್ದಾರೆ’ ಎಂದು ಟೀಕಿಸಿದರು. 

ಕಾಂಗ್ರೆಸ್ ನೈತಿಕ ಪೊಲೀಸ್ ಗಿರಿಯ ಮೇಲೆ ದಾಳಿ ನಡೆಸುವ ಮೂಲಕ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಮುಂದಾಗಿದೆ. ಪೊಲೀಸ್ ಅಧಿಕಾರಿಗಳ ಸಭೆಯಲ್ಲೂ ಅವರಿಗೆ ಎಲ್ಲಿಲ್ಲದ ಬೆದರಿಕೆಯನ್ನು ಹಾಕಿದೆ ಎಂದು ದೂರಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಜನತೆಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಹೇಳಿತ್ತು. ಆದರೆ, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಗ್ಯಾರಂಟಿಗಳಿಗೆ ಸರಕಾರ ಕೇವಲ ಅನುಮೋದನೆ ಮಾತ್ರ ನೀಡಿದೆ ಎಂದು ಆರ್.ಅಶೋಕ್ ಆರೋಪಿಸಿದರು.

Similar News