ತಿಹಾರ್ ಜೈಲಿನಲ್ಲಿ ಕುಸಿದುಬಿದ್ದ ಎಎಪಿ ನಾಯಕ ಸತ್ಯೇಂದ್ರ ಜೈನ್; ಆಸ್ಪತ್ರೆಗೆ ದಾಖಲು

Update: 2023-05-25 05:58 GMT

ಹೊಸದಿಲ್ಲಿ: ತಲೆತಿರುಗುವಿಕೆಯಿಂದ ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ಎಎಪಿ ನಾಯಕ ಹಾಗೂ ದಿಲ್ಲಿಯ  ಮಾಜಿ ಸಚಿವ ಸತ್ಯೇಂದ್ರ ಜೈನ್ (Satyendar Jain)ಅವರನ್ನು ಗುರುವಾರ ಇಲ್ಲಿನ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷ ತಿಳಿಸಿದೆ.

ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಜೈನ್‌ಅವರು ಜೈಲಿನಲ್ಲಿದ್ದಾರೆ.

"ಸತ್ಯೇಂದ್ರ ಜೈನ್ ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತಿಹಾರ್ ಜೈಲಿನ ಸ್ನಾನಗೃಹದಲ್ಲಿ ತಲೆತಿರುಗುವಿಕೆಯಿಂದ ಕುಸಿದು ಬಿದ್ದಿದ್ದಾರೆ. ಇದಕ್ಕೂ ಮೊದಲು ಸತ್ಯೇಂದ್ರ ಜೈನ್ ಅವರು ಸ್ನಾನಗೃಹದಲ್ಲಿ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯವಾಗಿತ್ತು" ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ.

ಸೋಮವಾರ ಜೈನ್ ಅವರು ಅಸ್ವಸ್ಥಗೊಂಡಿದ್ದರಿಂದ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

Similar News