ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕಸರತ್ತು | ಕೆ.ಸಿ ವೇಣುಗೋಪಾಲ್​ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ

Update: 2023-05-25 07:08 GMT

ಬೆಂಗಳೂರು, ಮೇ 25: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯ ಕರ್ನಾಟಕ ಭವನದಿಂದ ಕೆ.ಸಿ.ವೇಣುಗೋಪಾಲ್​ ನಿವಾಸಕ್ಕೆ ತೆರಳಿದ್ದಾರೆ.

ಇಂದು (ಗುರವಾರ) ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಜತೆಗೂ ಚರ್ಚೆ ನಡೆಸಿ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆಗಳ ಹಂಚಿಕೆ ಕುರಿತು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆಗಳ ಹಂಚಿಕೆಗೆ ವರಿಷ್ಠರಿಂದ ಹಸಿರು ನಿಶಾನೆ ಸಿಕ್ಕಿದ್ದಲ್ಲಿ ರವಿವಾರದೊಳಗೆ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಮೊದಲ ಹಂತದಲ್ಲೆ 25 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಉದ್ದೇಶಿಸಲಾಗಿತ್ತು. ಆದರೆ, ಅಂತಿಮವಾಗಿ ಎಂಟು ಮಂದಿಗೆ ಮಾತ್ರ ಸಂಪುಟ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು.

Similar News