ಜೆಡಿಎಸ್ ಪಕ್ಷದ ವಿಸರ್ಜನೆ ಯಾವಾಗ?: ಕುಮಾರಸ್ವಾಮಿಗೆ ಕಾಂಗ್ರೆಸ್ ತಿರುಗೇಟು

Update: 2023-05-25 17:33 GMT

ಬೆಂಗಳೂರು: ಐದು ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದ ಕಾಂಗ್ರೆಸ್ ಸರಕಾರದ ಬಣ್ಣ ಬಯಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,  'ನಾವು ಅರ್ಹ ಫಲಾನುಭವಿಗಳಿಗೆ ನಮ್ಮ ಗ್ಯಾರಂಟಿಗಳನ್ನು ಜಾರಿಗೊಳಿಸುವುದು ನಿಶ್ಚಿತ. ಕುಮಾರಸ್ವಾಮಿಯವರೇ, ಆ ಚಿಂತೆ ಬಿಡಿ. ಜೆಡಿಎಸ್ ಪಕ್ಷದ ವಿಸರ್ಜನಾ ಕಾರ್ಯಕ್ರಮದ ಮುಹೂರ್ತ ಯಾವಾಗ ಹೇಳಿ!?' ಎಂದು ಪ್ರಶ್ನೆ ಮಾಡಿದೆ. 

''ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ'' ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದೆ. 

Similar News