ಬಂಟ್ವಾಳ: ಮನೆಗೆ ಆಕಸ್ಮಿಕ ಬೆಂಕಿ; 2 ಲಕ್ಷಕ್ಕೂ ಅಧಿಕ ರೂ. ನಷ್ಟ

Update: 2023-05-26 06:32 GMT

ಬಂಟ್ವಾಳ : ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಚೆನೈತ್ತೋಡಿ ಗ್ರಾಮದ ವಾಮದಪದವಿನಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

ವಾಮದಪದವು ಸಮೀಪದ ಕಡ್ತಲಬೆಟ್ಟು ಕೋಡಿ ಬಾಕಿಮಾರ್ ಎಂಬಲ್ಲಿ ಸುಧಾಕರ್ ಶೆಟ್ಟಿ ಎಂಬವರ ಮನೆಗೆ ಗುರುವಾರ ಮಧ್ಯ ರಾತ್ರಿ 12.30 ರ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸುಮಾರು 2 ಲಕ್ಷಕ್ಕೂ ಅಧಿಕ ರೂ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. ಮನೆಯಲ್ಲಿ ಮಲಗಿದ್ದ ವರಿಗೆ ಕೂಡಲೇ ಎಚ್ಚರವಾದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

Similar News