ನನಗೆ ಕೃಷಿ ಸಚಿವನಾಗುವ ಆಸೆಯಿದೆ ಎಂದ ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ

Update: 2023-05-26 10:50 GMT

ಹುಬ್ಬಳ್ಳಿ: ಎಲ್ಲರಿಗೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಆಗುವ ಆಸೆ ಇದ್ದೆ ಇರುತ್ತೆ, ಅದರಂತೆ ನನಗೂ ಕೃಷಿ ಸಚಿವನಾಗುವ ಆಸೆಯಿದೆ ಎಂದು ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದ್ದಾರೆ. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಯುವಕರಿಗೆ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂಬುದು ಇದ್ದರೇ ನನ್ನನ್ನು ಸಹ ಪರಿಗಣಿಸಿ, ನಮ್ಮ ಪಕ್ಷದ ವರಿಷ್ಠರಿಗೆ ಇದು ನನ್ನ ಮನವಿ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ವಿಷಯದ ಕುರಿತು ಪ್ರತಿಕ್ರಿಯೆ ನೀಡಿ, ಜಗದೀಶ್ ಶೆಟ್ಟರ್ ಅವರಿಗೆ ಸಚಿವ ಸ್ಥಾನ ಕೊಟ್ಟರೇ ಏನೂ ತಪ್ಪಿಲ್ಲ. ಅವರು ಹಿರಿಯರು ಮತ್ತು ಮಾಜಿ ಮುಖ್ಯಮಂತ್ರಿಗಳಿದ್ದಾರೆ.‌ ಅವರಿಗೆ ಸರಿ ಸಮಾನವಾಗಿರುವ ಹುದ್ದೆ ನೀಡುವುದು ಸೂಕ್ತ ಎಂದರು.

'ಮಹದಾಯಿ ಯೋಜನೆ ಜಾರಿ ವಿಚಾರವಾಗಿ ಮಾತನಾಡಿ, ಮಹದಾಯಿ ನೀರಿಗಾಗಿ ಬಿಜೆಪಿ ಹೇಳಿರುವ ಮಾಹಿತಿಯನ್ನು ಪರಿಶೀಲನೆ ಮಾಡಲಾಗುತ್ತಿದೆ. ಬಿಜೆಪಿ ಎಷ್ಟು ಸುಳ್ಳು ಹೇಳಿದ್ದಾರೆ? ಎಷ್ಟು ಸತ್ಯ ಹೇಳಿದ್ದಾರೆ ಎಂಬುದನ್ನು ಸಮಾಲೋಚನೆ ಮಾಡಲಾಗುವುದು. ಸದ್ಯ ಮಹದಾಯಿ ವಿಚಾರದಲ್ಲಿ ಬಿಜೆಪಿ ಯಾವುದೇ ಟೆಂಡರ್ ಕರೆದಿಲ್ಲ.  ಕೇವಲ ನೋಟಿಸ್ ತೋರಿಸಲಾಗಿದೆ. ಅರಣ್ಯ ಇಲಾಖೆ ಯಾವುದೇ ಕ್ಲಿಯರೆನ್ಸ್ ನೀಡಿಲ್ಲ' ಎಂದರು.

Similar News