ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ನಿರ್ಧರಿಸುತ್ತಾರೆ: ಸುರ್ಜೇವಾಲಾ

''ನಾಳೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ''

Update: 2023-05-26 13:44 GMT

ಹೊಸದಿಲ್ಲಿ: 'ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡುತ್ತಾರೆ' ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ಕರ್ನಾಟಕ ಸಚಿವ ಸಂಪುಟ ರಚನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಕ್ಷದ ನಾಯಕರ ಜೊತೆ ಸಿದ್ದರಾಮಯ್ಯ ಅವರು ಹಲವು ಹೆಸರುಗಳನ್ನು ಮುಂದಿಟ್ಡಿದ್ದಾರೆ. ಎಲ್ಲವೂ ಕೂಡ ಮುಖ್ಯಮಂತ್ರಿಗಳ ವಿವೇಚನೆ, ಅವರ ಪರಮಾಧಿಕಾರ. ನಾಳೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ' ಎಂದು ತಿಳಿಸಿದರು. 

ಸದ್ಯ ಸಂಪುಟ ವಿಸ್ತರಣೆ ಚರ್ಚೆ ಮುಕ್ತಾಯಗೊಂಡಿದ್ದು, ಖಾತೆಗಳ‌ ಹಂಚಿಕೆ ಬಗ್ಗೆ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Similar News