ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಎಚ್​.ಸಿ.ಮಹದೇವಪ್ಪ

''ಕಾಂಗ್ರೆಸ್​ನಲ್ಲಿ ಯಾವುದೇ ಬಣ ಇಲ್ಲ''

Update: 2023-05-27 05:46 GMT

ಬೆಂಗಳೂರು: 'ಮುಖ್ಯಮಂತ್ರಿಗಳು ನನಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ' ಎಂದು ನಿಯೋಜಿತ ಸಚಿವ, ತಿ.ನರಸೀಪುರ ಶಾಸಕ ಡಾ. ಎಚ್​.ಸಿ.ಮಹದೇವಪ್ಪ ತಿಳಿಸಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  'ನಾನು ಯಾವತ್ತೂ ಸಚಿವ ಸ್ಥಾನ, ಇಂತಹದ್ದೇ ಖಾತೆ ಬೇಕು ಎಂದಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟಾಗ ಸಮರ್ಥವಾಗಿ ನಿಭಾಯಿಸಿದ್ದೇನೆ' ಎಂದು ಹೇಳಿದರು. 

''ಕಾಂಗ್ರೆಸ್​ನಲ್ಲಿ ಯಾವುದೇ ಬಣ ಇಲ್ಲ''

'ಕಾಂಗ್ರೆಸ್​ನಲ್ಲಿ ಯಾವುದೇ ಬಣ ಇಲ್ಲ, ಇರೋದು ಕಾಂಗ್ರೆಸ್​ ಬಣ. ನಮ್ಮ ಕ್ಷೇತ್ರದ ಜನರು, ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ. ಕ್ಷೇತ್ರದ ಜತೆಗೆ ರಾಜ್ಯದ ಅಭಿವೃದ್ಧಿಗೆ ಗಮನಕೊಡುತ್ತೇನೆ' ಎಂದು ಎಚ್​.ಸಿ.ಮಹದೇವಪ್ಪ ತಿಳಿಸಿದರು. 

Similar News