ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ರಾಜಶೇಖರ ಹೆಬ್ಬಾರ್‌ಗೆ ಸನ್ಮಾನ

Update: 2023-05-27 12:07 GMT

ಉಡುಪಿ, ಮೇ 27: ಉಡುಪಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಿವೃತ್ತರಾಗಲಿರುವ ಕಾಲೇಜು ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ರಾಜಶೇಖರ ಹೆಬ್ಬಾರ್ ಸಿ. ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ಸ್ಥಾಪಕ ಪ್ರಾಂಶುಪಾಲರಾಗಿ, ಶಿವಮೊಗ್ಗ ವಲಯದ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ ವೃತ್ತಿಯಿಂದ ನಿವೃತ್ತಿ ಹೊಂದಲಿರುವ ರಾಜಶೇಖರ್ ಹೆಬ್ಬಾರ್ ಅವರನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗೌರವಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ ಶೆಟ್ಟಿ ಶುಭಶಂಸನೆಗೈದರು.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸ್ಟೀವನ್ ಕ್ವಾಡ್ರಸ್ ಮಾತನಾಡಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ರಾಮಚಂದ್ರ ಅಡಿಗ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ರವಿರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ವಿಭಾಗದ ಮಂಜುನಾಥ್ ವಂದಿಸಿದರು.

Similar News