ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛ ಕಡಲ ತೀರ - ಹಸಿರು ಕೋಡಿ ಅಭಿಯಾನ-21

Update: 2023-05-28 16:02 GMT

ಕುಂದಾಪುರ, ಮೇ 28: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಪ್ರತಿ ತಿಂಗಳ ಕೊನೆಯ ರವಿವಾರ ನಡೆಯುವ ಸ್ವಚ್ಛ ಕಡಲ ತೀರ- ಹಸಿರು ಕೋಡಿ ಅಭಿಯಾನ-21 ಇಂದು ಯಶಸ್ವಿಯಾಗಿ ನಡೆಯಿತು.

ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಪರಿಸರ ಪ್ರೇಮಿ ಸಯ್ಯದ್ ಮೊಹಮ್ಮದ್ ಬ್ಯಾರಿ, ಮಾನವ ಜನ್ಮ ದೊಡ್ಡದು. ಮೋಕ್ಷವೆಂಬುದು ಕೇವಲ ದೇವಾಲಯ, ಮಸೀದಿ, ಚರ್ಚ್‌ಗಳಲ್ಲಿ ದೊರಕಲಾಗದು. ನಾವು ಮಾಡುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಂದ ನಿಜವಾದ ನೆಮ್ಮದಿ ಮೋಕ್ಷ ಪ್ರಾಪ್ತವಾಗುವುದು ಎಂದು ಹೇಳಿದರು.

ಅಭಿಯಾನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುಲ್ ರಹ್ಮಾನ್, ಸಂಯೋಜಕ ಪ್ರೊ.ಆಕಾಶ್, ಸಲಹೆಗಾರ ಅಬು ಶೇಕ್ ಸಾಹೇಬ್, ಕೋಡಿ ಚಕ್ರೇಶ್ವರಿ ದೇವಸ್ಥಾನ ಧರ್ಮದರ್ಶಿ ಗೋಪಾಲ ಪೂಜಾರಿ, ಡಾ.‌ ಆಸಿಫ್, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Similar News