ಕುತ್ಯಾರು: ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ
Update: 2023-05-28 12:21 GMT
ಶಿರ್ವ, ಮೇ 28: ಕುತ್ಯಾರು ಸಾಯಿ ಕ್ರಿಯೇಷನ್ ಸಂಸ್ಥೆಯ ಪ್ರಾಯೋಜಕತ್ವ ದಲ್ಲಿ ಕುತ್ಯಾರು ವಿದ್ಯಾದಾಯಿನಿ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಪಂ ಅಧ್ಯಕ್ಷೆ ಲತಾ ಆಚಾರ್ಯ, ಸಾಯಿ ಕ್ರಿಯೇಷನ್ ಪ್ರವರ್ತಕ ಸಾಯಿನಾಥ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ, ಸ್ಥಳೀಯ ಪ್ರಮುಖರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಪ್ರಸಾದ್ ಕುತ್ಯಾರು ಮೊದಲಾದವರು ಉಪಸ್ಥಿತರಿದ್ದರು. ಸುಮಾರು 198 ಪಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡರು.