ಸೋಲನ್ನು ಸವಾಲಾಗಿ ಸ್ವೀಕರಿಸಿ ಮುನ್ನುಗ್ಗಿದರೆ ಯಶಸ್ಸು: ಎಸ್ಪಿ ಅಕ್ಷಯ್

Update: 2023-05-28 12:23 GMT

ಉಡುಪಿ, ಮೇ 28: ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2022-23ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷ್ ಮಚ್ಚಿಂದ್ರ ಮಾತನಾಡಿ, ವಿದ್ಯಾರ್ಥಿಗಳು ಸೋಲನ್ನು ಸವಾಲಾಗಿ ಸ್ವೀಕರಿಸಿ ಛಲದಿಂದ ಮುನ್ನುಗ್ಗಿದರೆ ಯಶಸ್ಸು ಲಭಿಸುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಡುವ ಮೂಲಕ ವಿದ್ಯಾರ್ಥಿಗಳು ಜೀವನೋತ್ಸಾಹವನ್ನು ತುಂಬಿಕೊಳ್ಳಬೇಕು ಎಂದರು.

ತೆಂಕನಿಡಿಯೂರು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗಡೆ ಶುಭ ಹಾರೈಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು. ಸಹಪ್ರಾಧ್ಯಾಪಕ ಮಂಜುನಾಥ್ ವಂದಿಸಿದರು. ಕ್ರೀಡಾ ಪ್ರತಿನಿಧಿಗಳಾದ ವೈಶಾಲಿ, ರುತು ಹಾಗೂ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Similar News