ದ.ಕ. ಜಿಲ್ಲಾ ಕಸಾಪ ಪದಾಧಿಕಾರಿಗಳ ಪುನಶ್ಚೇತನ ಶಿಬಿರ

Update: 2023-05-28 13:37 GMT

ಮಂಗಳೂರು, ಮೇ 28: ಸಂಘಟನೆಯನ್ನು ಕೆಡಹುದಕ್ಕಿಂತ ಕಟ್ಟುವ ಪರ್ಯಾಯ ದಾರಿಗಳ ಶೋಧ ಮುಖ್ಯ. ವ್ಯಕ್ತಿಗಿಂತ ಸಂಸ್ಥೆ ಮುಖ್ಯ ಎಂಬುದನ್ನು ಸಂಘಟನೆಯಲ್ಲಿರುವ ಎಲ್ಲರೂ ಅರಿತಿರಬೇಕು. ಪರಿಣಾಮಕಾರಿ ಸಂವಹನ ಮತ್ತು ಸಮನ್ವಯದಿಂದ ಬಲಿಷ್ಠ ಸಂಘಟನೆ ಸಾಧ್ಯ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ ಚಿನ್ನಪ್ಪಗೌಡ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಮಂದಿರದಲ್ಲಿ ರವಿವಾರ ನಡೆದ ಪದಾಧಿಕಾರಿಗಳ ಪುನಶ್ಚೇತನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಮಾತನಾಡಿ ಜಿಲ್ಲೆಯ ಕಸಾಪ ವಿವಿಧ ಘಟಕಗಳು ಕ್ರಿಯಾ ಶೀಲವಾಗಿವೆ. ಪದಾಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಇನ್ನಷ್ಟು ಅರ್ಥಪೂರ್ಣ ಕಾರ್ಯಕ್ರಮಗಳು ನಡೆಸಲು ಮುಂದಾಗಬೇಕು ಎಂದರು.

ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ಕುವೆಂಪು ಭಾಷಾ ಭಾರತಿಯ ಮಾಜಿ ಅಧ್ಯಕ್ಷ ಡಾ.ಅಜೆಕ್ಕಳ ಗಿರೀಶ್ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಕಾರ್ಯಾಗಾರದಲ್ಲಿ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಉಳ್ಳಾಲ, ಮೂಡುಬಿದಿರೆ, ಕಡಬ, ಮುಲ್ಕಿ ತಾಲೂಕಿನ ಕಸಾಪ  ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಸಾಪ ಕೇಂದ್ರ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ. ಸ್ವಾಗತಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ  ಚಂದ್ರಹಾಸ ಶೆಟ್ಟಿ ದೇರಳಕಟ್ಟೆ ವಂದಿಸಿದರು. ಚಂದ್ರಾವತಿ ಕೆ. ಸುಳ್ಯ ಪ್ರಾರ್ಥಿಸಿದರು. ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯು.ಎಚ್ ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

Similar News