ಮುರಳೀಧರ

Update: 2023-05-28 14:11 GMT

ಮಂಗಳೂರು: ಸುರತ್ಕಲ್‌ನ ಚಿರಂತನ ವೃದ್ದಾಶ್ರಮದಲ್ಲಿ ಮ್ಯಾನೇಜರ್ ಆಗಿದ್ದ ಸುಳ್ಯ ತಾಲೂಕು ಮುಪ್ಪೇರಿಯ ಗ್ರಾಮದ ಗಣಪಯ್ಯ ಕಾಯಾರ ಅವರ ಪುತ್ರ ಕೆ.ಜಿ.ಮುರಲೀಧರ (52) ಶನಿವಾರ ಹೃದಯಾಘಾತದಿಂದ ನಿಧನರಾದರು.

ಮೃತರು ತಂದೆ, ತಾಯಿ, ಪತ್ನಿ, ಪುತ್ರ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ, ಸುರತ್ಕಲ್ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಸದಸ್ಯರಾಗಿದ್ದ ಮುರಳೀಧರ್, ಸಾಹಿತ್ಯ, ಸಂಗೀತ ಕಾರ್ಯಕ್ರಮಗಳ ನಿರೂಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

Similar News

ವಸಂತಿ