ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ..: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

Update: 2023-05-28 15:55 GMT

ಬೆಂಗಳೂರು: ತಾತನಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ ಜಯಚಂದ್ರ ಅವರ ಮೊಮ್ಮಗಳು ರಾಹುಲ್‌ ಗಾಂಧಿ ಅವರಿಗೆ ಪತ್ರ ಬರೆದು ಭಾವನಾತ್ಮಕ ಮನವಿ ಮಾಡಿದ್ದಾಳೆ. 

ರಾಹುಲ್‌ ಗಾಂಧಿ ಅವರಿಗೆ ಇಂಗ್ಲಿಷ್‌ನಲ್ಲಿ ಪತ್ರ ಬರೆದಿರುವ ಜಯಚಂದ್ರ ಮೊಮ್ಮಗಳು ಅರನಾ ಸಂದೀಪ್‌, Dear Rahu Gandhi, I Am TB Jayachandras Granddaughter. I Am sad that my grandfather did not become minister. I want him to become minister because he is kind, capable and hardworking. Please. ಎಂದು ಬರೆದಿದ್ದಾಳೆ.

ಇನ್ನು ವಿಡಿಯೋದಲ್ಲಿ ಮಾತನಾಡಿರುವ ಅರನಾ, 'ನನ್ನ ತಾತ ಮಿನಿಸ್ಟರ್ ಆಗದಿದ್ದಕ್ಕೆ ನನಗೆ ಬೇಜಾರಾಗಿದೆ. ಅವರು ಹಾರ್ಡ್ ವರ್ಕ್ ಮಾಡುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡಿ. ಜನರಿಗೆ ತುಂಬಾ ಪ್ರೀತಿ‌ ಕೊಟ್ಟು,ಸಹಾಯ ಮಾಡ್ತಾರೆ' ಎಂದು  ಭಾವನಾತ್ಮಕವಾಗಿ ಮನವಿ ಮಾಡಿಕೊಂಡಿದ್ದಾಳೆ. 

ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದ್ದು, ಸ್ಪೀಕರ್ ಹುದ್ದೆ ಸ್ವೀಕರಿಸಲು ನಿರಾಕರಿಸಿದ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾದ ಆರ್.ವಿ.ದೇಶಪಾಂಡೆ, ಟಿ.ಬಿ.ಜಯಚಂದ್ರ, 

ಇನ್ನು ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯರಾದ ಟಿ.ಬಿ.ಜಯಚಂದ್ರ, ಆರ್.ವಿ.ದೇಶಪಾಂಡೆ ಸೇರಿ ಹಲವು ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದೆ. 

Similar News