ಕುಂದಾಪುರ: ಕಸದಲ್ಲಿ ಸಿಕ್ಕಿದ ಉಂಗುರ ಮರಳಿಸಿದ ಸ್ವಚ್ಛತಾ ಸಿಬ್ಬಂದಿ

Update: 2023-05-28 15:44 GMT

ಕುಂದಾಪುರ, ಮೇ 28: ಶಂಕರನಾರಾಯಣ ಗ್ರಾಮ ಪಂಚಾಯತ್‌ನ ಎಸ್‌ಎಲ್‌ಆರ್‌ಎಂ ಘಟಕದ ಸ್ವಚ್ಚತಾ ಗಾರರಾದ ದೇವಕಿ ಅವರಿಗೆ ಘನ ತ್ಯಾಜ್ಯ ದಲ್ಲಿ ಸಿಕ್ಕಿದ ಚಿನ್ನದ ಉಂಗುರವನ್ನು ವಾರೀಸುದಾರರಿಗೆ ರವಿವಾರ ಹಸ್ತಾಂತರಿ ಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಪ್ರತಿದಿನ ಕಸ ನೀಡುವ ಮನೆಯವರ 2 ಗ್ರಾಂ ತೂಕದ ಚಿನ್ನ ಉಂಗುರ ಕಳೆದು ಹೋಗಿತ್ತು. ಈ ಬಗ್ಗೆ ಕಸ ವಿಲೇವಾರಿ ಘಟಕದವರಿಗೆ ಮಾಹಿತಿ ನೀಡಿ, ಕಸದ ಜೊತೆ ಬಂದಿದ್ದರೆ ನೀಡುವಂತೆ ಕೇಳಿಕೊಂಡಿದ್ದರು. ಅದರಂತೆ ಬೈಲೂರು ಮೂಡುಬೈಲೂರಿನಲ್ಲಿ ಕಸ ವಿಲೇವಾರಿ ಮಾಡುವಾಗ ಕಸದಲ್ಲಿ ಚಿನ್ನದ ಉಂಗುರ ದೇವಕಿ ಅವರಿಗೆ ಸಿಕ್ಕಿತ್ತು. ಕೂಡಲೇ ಅವರು ಸಂಬಂಧಪಟ್ಟ ಮನೆಯವರಿಗೆ ಮಾಹಿತಿ ನೀಡಿ ವಾರೀಸುದಾರ ಕುಶಾಲ್ ಕೊಠಾರಿ ಅವರಿಗೆ ಹಸ್ತಾಂತರಿಸಿದ್ದಾರೆ.

Similar News