ಉಪಸಭಾಪತಿ ಸ್ಥಾನ ತಿರಸ್ಕರಿಸಿದ ಶಾಸಕ ಪುಟ್ಟರಂಗಶೆಟ್ಟಿ

Update: 2023-05-28 17:54 GMT

ಚಾಮರಾಜನಗರ: ಕಾಂಗ್ರೆಸ್ ಸರಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದೆ. ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿ ಪುಟ್ಟರಂಗಶೆಟ್ಟಿ ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದ್ದು, ಆದರೆ ಆ ಸ್ಥಾನವನ್ನು ಶಾಸಕ ಪುಟ್ಟರಂಗಶೆಟ್ಟಿ ತಿರಸ್ಕರಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಶಾಸಕ ಪುಟ್ಟರಂಗಶೆಟ್ಟಿ, ತಮ್ಮ ಬೆಂಬಲಿಗರು ಮತ್ತು ಮತದಾರರು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಅನುಸರಿಸಿ ಸ್ಥಾನವನ್ನು ಸ್ವೀಕರಿಸದಿರಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ. 

'ನಾನು ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಸ್ವೀಕರಿಸುವುದಿಲ್ಲ. ನನ್ನ ಬೆಂಬಲಿಗರು ಮತ್ತು ಮತದಾರರು ಅದನ್ನು ಸ್ವೀಕರಿಸಬೇಡಿ ಎಂದು ಕೇಳಿಕೊಂಡಿದ್ದಾರೆ. ನಾನು ಅವರ ಮಾತನ್ನು ತೆಗೆದುಹಾಕಲು ಸಾಧ್ಯವಿಲ್ಲ. ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವುದು ಅವರಿಗೆ ಇಷ್ಟವಿಲ್ಲ, ಹಾಗಾಗಿ ನಾನು ಒಪ್ಪಿಕೊಳ್ಳುವುದಿಲ್ಲ' ಎಂದು ಹೇಳಿದ್ದಾರೆ. 

Similar News