ನೂತನ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ | ಪರಮೇಶ್ವರ್ ಗೆ ಗೃಹ, ಡಿಕೆಶಿಗೆ ಜಲಸಂಪನ್ಮೂಲ, ಜಾರ್ಜ್‍ಗೆ ಇಂಧನ

ಯಾರಿಗೆ ಯಾವ ಖಾತೆ? ಸಂಪೂರ್ಣ ಪಟ್ಟಿ ಇಲ್ಲಿದೆ...

Update: 2023-05-29 17:53 GMT

ಬೆಂಗಳೂರು, ಮೇ 29: ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಂಪುಟ ದರ್ಜೆ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು, ಸಂಪುಟ ವ್ಯವಹಾರಗಳು, ಗುಪ್ತಚರ, ಐಟಿ ಮತ್ತು ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಯಂತಹ ಪ್ರಮುಖ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರ ಅಭಿವೃದ್ಧಿಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಡಾ.ಜಿ. ಪರಮೇಶ್ವರ್ ಅವರಿಗೆ ಮಹತ್ವದ ಗೃಹ ಖಾತೆಯನ್ನು ನೀಡಲಾಗಿದೆ.

ಸಚಿವರ ಖಾತೆ ಹಂಚಿಕೆ ಅಧಿಕೃತ ಪಟ್ಟಿ ಇಲ್ಲಿದೆ

ಸಿ ಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಮೂಲಸೌಕರ್ಯ ಅಭಿವೃದ್ಧಿ ಖಾತೆ

ಡಿ ಸಿ ಎಂ ಡಿ.ಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ

ಡಾ. ಜಿ.ಪರಮೇಶ್ವರ್- ಗೃಹ (ಗುಪ್ತಚರ ಹೊರತುಪಡಿಸಿ)

ಎಚ್.ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ ವ್ಯವಹಾರಗಳು,
ಶಾಸನ, ಪ್ರವಾಸೋದ್ಯಮ. 

ಕೆ.ಹೆಚ್.ಮುನಿಯಪ್ಪ- ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ
ವ್ಯವಹಾರಗಳು. 

ರಾಮಲಿಂಗಾ ರೆಡ್ಡಿ- ಸಾರಿಗೆ ಮತ್ತು ಮುಜರಾಯಿ.

ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು. 

ಕೆ.ಜೆ.ಜಾರ್ಜ್‌- ಇಂಧನ

ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ

ಸತೀಶ್ ಜಾರಕಿಹೊಳಿ- ಲೋಕೋಪಯೋಗಿ

ಕೃಷ್ಣ ಬೈರೇಗೌಡ- ಕಂದಾಯ

ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್
ರಾಜ್

ಶಿವಾನಂದ ಪಾಟೀಲ್-ಜವಳಿ, ಕಬ್ಬು ಅಭಿವೃದ್ಧಿ

ಝಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ

ಶರಣಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆಗಳು, ಸಾರ್ವಜನಿಕ
ಉದ್ಯಮಗಳು

ಈಶ್ವರ್ ಖಂಡ್ರೆ- ಅರಣ್ಯ, ಜೈವಿಕ ಮತ್ತು ಪರಿಸರ

ಚಲುವರಾಯಸ್ವಾಮಿ- ಕೃಷಿ

ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ

ರಹೀಂ ಖಾನ್: ಪೌರಾಡಳಿತ,ಹಜ್

ಸಂತೋಷ್ ಲಾಡ್- ಕಾರ್ಮಿಕ

ಡಾ.ಶರಣುಪ್ರಕಾಶ್ ಪಾಟೀಲ್- ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ
ಅಭಿವೃದ್ಧಿ

ಆರ್.ಬಿ.ತಿಮ್ಮಾಪುರ- ಅಬಕಾರಿ

ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು
ರೇಷ್ಮೆ ಕೃಷಿ. 

ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ

ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

ಬಿ‌.ನಾಗೇಂದ್ರ:ಯುವಜನ ಸೇವೆಗಳು, ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ 

ಕೆ.ಎನ್.ರಾಜಣ್ಣ: ಸಹಕಾರ ( ಕೃಷಿ ಮಾರುಕಟ್ಟೆ ಹೊರತುಪಡಿಸಿ)

ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)

ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,
ಅಂಗವಿಕಲರು ಮತ್ತು ಹಿರಿಯ ನಾಗರಿಕರ
ಕಲ್ಯಾಣ. 

ಮಂಕಾಳ್ ವೈದ್ಯ- ಮೀನುಗಾರಿಕೆ ಮತ್ತು ಬಂದರು, ಒಳನಾಡು
ಸಾರಿಗೆ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ

ಎನ್.ಎಸ್.ಬೋಸೆರಾಜು: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ   

Similar News