ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Update: 2023-05-29 07:20 GMT

ಹುಣಸೂರು, ಮೇ 29: ಸಾಲಬಾಧೆಯಿಂದ ರೈತನೋರ್ವ ನೇಣುಬಿಗಿ ದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕರ್ಣಕುಪ್ಪೆಯಲ್ಲಿ ರವಿವಾರ ವರದಿಯಾಗಿದೆ.

ಮೃತಪಟ್ಟವನ್ನು ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕರ್ಣಕುಪ್ಪೆಯ ನಿವಾಸಿ ರಾಜಶೆಟ್ಟಿ(78) ಎಂದು ಗುರುತಿಸಲಾಗಿದೆ. ಇವರಿಗೆ ಪತ್ನಿ, ನಾಲ್ವರು ಮಕ್ಕಳಿದ್ದಾರೆ. ಮೃತ ರಾಜಶೆಟ್ಟಿಗೆ ಗ್ರಾಮದಲ್ಲಿ ಐದು ಎಕರೆ ಜಮೀನಿದ್ದು, ತಂಬಾಕು, ರಾಗಿ ಮತ್ತಿತರ ಬೆಳೆ ಬೆಳೆಯುತ್ತಿದ್ದರು. ಬೆಳೆ ಬೆಳೆಯಲ್ಲಿ ಬ್ಯಾಂಕ್‌ ಹಾಗೂ ವಿವಿಧೆಡೆ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ತಂದೆ ಸಾಲತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಮೃತರ ಪುತ್ರ ರಘು ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಒಪ್ಪಿಸಲಾಗಿದ್ದು, ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

Similar News