'ಗ್ಯಾರಂಟಿ' ಜಾರಿ ಖಚಿತ, ತುಸು ತಾಳ್ಮೆಯಿಂದಿರಿ: ಪ್ರತಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-05-29 09:27 GMT

ಬೆಳಗಾವಿ: ''ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಜನರಿಗೆ ಆಶ್ವಾಸನೆ ನೀಡಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಪ್ರತಿಪಕ್ಷದವರು ತುಸು ತಾಳ್ಮೆಯಿಂದ ಇರಬೇಕು'' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಳಿದ್ದಾರೆ.  

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಚುನಾವಣೆ ಸಂದರ್ಭದಲ್ಲಿ ನೀಡಿದ ಎಲ್ಲ ಭರವಸೆಯನ್ನು ಹಂತವಾಗಿ ಈಡೇರಿಸುತ್ತೇವೆ. ಈಗಾಗಲೇ ಇದರ ಸಿದ್ಧತೆಗಳು ಆರಂಭವಾಗಿವೆ. ತುಸು ಸಮಯ ಬೇಕು'' ಎಂದು ತಿಳಿಸಿದರು. 

''ಬಿಜೆಪಿಯವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿ ಜನರಿಗೆ ನಂಬಿಸಿ ಕೈ ಕೊಟ್ಟಿದ್ದಾರೆ. ನಾವು ಹಾಗಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ತೀರ ವಿಳಂಬ ಮಾಡದೆ ಯೋಜನೆಗಳನ್ನು ಜಾರಿ ಮಾಡುತ್ತೇವೆ'' ಎಂದು ಸ್ಪಷ್ಟಪಡಿಸಿದರು. 

Similar News