ತೆಂಗಿನ ಮರದಿಂದ ಬಿದ್ದು ಮೃತ್ಯು
Update: 2023-05-29 14:25 GMT
ಬೈಂದೂರು, ಮೇ 29: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮ ಅಲ್ಸಾಡಿ ಜಡ್ಡಾಡಿಮನೆ ಎಂಬಲ್ಲಿ ನಡೆದಿದೆ.
ಮೃತರನ್ನು ಅಲ್ಸಾಡಿ ನಿವಾಸಿ ವೆಂಕಪ್ಪಶೆಟ್ಟಿ (68) ಎಂದು ಗುರುತಿಸಲಾಗಿದೆ. ಇವರು ಮೇ 27ರಂದು ತೆಂಗಿನ ಕಾಯಿ ಕೀಳಲು ತೋಟಕ್ಕೆ ಹೋಗಿದ್ದು ತೆಂಗಿನಕಾಯಿ ಕಿತ್ತು ಇಳಿಯುತ್ತಿರುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಆಯ ತಪ್ಪಿ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು, ಮೇ 28ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.