ಶಿವಮೊಗ್ಗ: ಸಿಡಿಲು ಬಡಿದು ಮಹಿಳೆ ಮೃತ್ಯು

Update: 2023-05-29 17:03 GMT

ಶಿವಮೊಗ್ಗ: ನಗರದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೊಮ್ಮನಕಟ್ಟೆ ಆ‍ಶ್ರಯ ಬಡಾವಣೆಯಲ್ಲಿ ಸೋಮವಾರ ವರದಿಯಾಗಿದೆ.

ಮೃತ ಮಹಿಳೆಯನ್ನು ಲಕ್ಷ್ಮಿಬಾಯಿ (28) ಎಂದು ಗುರುತಿಸಲಾಗಿದೆ. ಬೊಮ್ಮನಕಟ್ಟೆ ಆ‍ಶ್ರಯ ಬಡಾವಣೆ ನಿವಾಸಿ ಲಕ್ಷ್ಮಿಬಾಯಿ ಕುರಿಗಳಿಗೆ ಮೇವು ತರಲು ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿರಾಜ್ಯದಲ್ಲಿ ಮೇ 30ರಿಂದ ಭಾರೀ ಮಳೆ ಸಾಧ್ಯತೆ: 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Similar News