ಟಿ.ನರಸೀಪುರ ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಮೋದಿ

Update: 2023-05-29 17:27 GMT

ಮೈಸೂರು: ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ  ಭೀಕರ ಅಪಘಾತದಲ್ಲಿ  ಮೃತಪಟ್ಟವರ ಕುಟುಂಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ಅಪಘಾತದಲ್ಲಿ ಮಂಡ್ಯ ಮೂಲದ ಕಾರು ಚಾಲಕ ಮತ್ತು ಮೂರು ಕುಟುಂಬಗಳ 9 ಸದಸ್ಯರು ಮೃತಪಟ್ಟಿದ್ದಾರೆ.

ಇದನ್ನೂ ಓದಿಟಿ.ನರಸೀಪುರ ಬಳಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿ ಸಂತಾಪ: ಮೈಸೂರು ಅಪಘಾತದಲ್ಲಿ ಮಕ್ಕಳು ಸೇರಿ 10 ಜನ ಮೃತಪಟ್ಟ ಸುದ್ದಿ ತಿಳಿದು ತೀವ್ರ ನೋವಾಯಿತು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು ಎಂದು ರಾಷ್ಟ್ರಪತಿ ಮುರ್ಮು ಅವರು ಟ್ವೀಟ್ ಮಾಡಿದ್ದಾರೆ.

Similar News