ಕಂದಕಕ್ಕೆ ಉರುಳಿದ ಯಾತ್ರಾರ್ಥಿಗಳಿದ್ದ ಬಸ್; 10 ಮಂದಿ ಮೃತ್ಯು

Update: 2023-05-30 05:43 GMT

ಶ್ರೀನಗರ: ಜಮ್ಮು -ಕಾಶ್ಮೀರದಲ್ಲಿ ವೈಷ್ಣೋ ದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು  ಸೇತುವೆಯಿಂದ ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಇನ್ನೂ 16 ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಅಮೃತಸರದಿಂದ ತೆರಳುತ್ತಿದ್ದಾಗ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಪ್ರದೇಶದ ಬಳಿ, ರಿಯಾಸಿ ಜಿಲ್ಲೆಯ ಕತ್ರಾದಿಂದ ಸುಮಾರು 15 ಕಿಮೀ ದೂರದಲ್ಲಿ ಈ ಘಟನೆ ಸಂಭವಿಸಿದೆ.

ಕತ್ರಾ ವೈಷ್ಣೋ ದೇವಿ ಯಾತ್ರಾರ್ಥಿಗಳಿಗೆ ಮೂಲ ಶಿಬಿರವಾಗಿದೆ.

ಏಳು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಮೃತಸರದಿಂದ ಕತ್ರಾಕ್ಕೆ ಹೋಗುತ್ತಿದ್ದಾಗ ಜಜ್ಜರ್ ಕೋಟ್ಲಿ ಬಳಿ ಆಳವಾದ ಕಮರಿಗೆ ಬಿದ್ದಿದೆ. ಗಂಭೀರವಾಗಿ ಗಾಯಗೊಂಡವರನ್ನು ಜಮ್ಮುವಿನ ಸರಕಾರಿ ವೈದ್ಯಕೀಯ ಕಾಲೇಜಿಗೆ ಕರೆತರಲಾಗಿದೆ. ಇತರ ಹನ್ನೆರಡು ಜನರನ್ನು ಸ್ಥಳೀಯ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ" ಎಂದು ಜಮ್ಮು ಡೆಪ್ಯುಟಿ ಕಮಿಷನರ್ (ಡಿಸಿ) ಅವ್ನಿ ಲವಾಸಾ ಸುದ್ದಿ ಸಂಸ್ಥೆ ANI ಗೆ ತಿಳಿಸಿದರು.

Similar News