ಬಂಟ್ವಾಳ: ಆಟೋ ರಿಕ್ಷಾ - ಬೈಕ್ ನಡುವೆ ಅಪಘಾತ; ನಾಲ್ಕು ಮಂದಿಗೆ ಗಾಯ

Update: 2023-05-30 11:26 GMT

ಬಂಟ್ವಾಳ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ಭಂಡಾರಿ ಬೆಟ್ಟುನಲ್ಲಿ  ಮಂಗಳವಾರ ಮಧ್ಯಾಹ್ನ ನಡೆದಿದೆ.

ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ ಉಜಿರೆ ನಿವಾಸಿ ಜೊಸ್ಟಿಲಿನ್ ಡಿ.ಸೋಜ, ಸಹ ಸವಾರ ರಶ್ಮಿತ್ ಹೀಗೆ ನಾಲ್ವರು ಗಾಯಗೊಂಡಿದ್ದಾರೆ.

ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಭಂಡಾರಿಬೆಟ್ಟು ಎಂಬಲ್ಲಿ ರಿಕ್ಷಾ ಬಿ.ಸಿ.ರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಢಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿವೆ ಹಾಗೂ ಎರಡು ವಾಹನಗಳ ಚಾಲಕರಿಗೆ ಗಾಯವಾಗಿದ್ದು ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಮೂರ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

Similar News